ಮಂಗಳವಾರ, ಆಗಸ್ಟ್ 9, 2011

ಇಂಡಿಯಾ ಮತ್ತು ಈರುಳ್ಳಿ




ನಾನು ಈರುಳ್ಳಿ ಸುಲಿಯುತ್ತಿದ್ದೆ
ಗೆಳೆಯ ಹೇಳುತ್ತಿದ್ದ
ಮುಸ್ಲಿಮರನ್ನು ಮುಗಿಸಬೇಕು
ಒಂದು ಸಿಪ್ಪೆಯ ಸುಲಿದೆ
ಕ್ರೈಸ್ತರನ್ನು ಕಳಿಸಬೇಕು
ಇನ್ನೊಂದು ತೆಗೆದೆ
ಹಿಂದುಳಿದವರನ್ನು ಹಿಮ್ಮೆಟ್ಟಿಸಬೇಕು
ಮತ್ತೊಂದು ತೆಗೆದೆ
ಹೀಗೆ ನಾನು ತೆರೆಯುತ್ತ ಹೋದೆ
ಗೆಳೆಯ ಸುಲಿಯುತ್ತ ಹೋದ

ಕೊನೆಗೆ ಉಳಿದಿದ್ದು
ನನ್ನ ಅವನ ಕಣ್ಣುಗಳಲ್ಲಿ ನೀರು ಮಾತ್ರ
-ರಾಜು ಹೆಗಡೆ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ